#vijayapatha
Explore tagged Tumblr posts
Text
KSRTC ಚಿಕ್ಕಬಳ್ಳಾಪುರ: ನಂದಿ ಜಾತ್ರೇಲಿ ಅತಿ ಹೆಚ್ಚು ₹97.44 ಆದಾಯ ಗಳಿಕೆ
ಚಿಕ್ಕಬಳ್ಳಾಪುರ: ಕಳೆದ ವಾರ ಜರುಗಿದ ನಂದಿ ಜಾತ್ರಾ ಕಾರ್ಯಚರಣೆಯಲ್ಲಿ ಚಿಕ್ಕಬಳ್ಳಾಪುರ ವಿಭಾಗದಿಂದ ಒಟ್ಟು 142 ವಾಹನಗಳನ್ನು ಕಾರ್ಯಚರಣೆ ಮಾಡಲಾಗಿದ್ದು, ಈ ಕಾರ್ಯಾಚರಣೆಯಲ್ಲಿ ವಿಭಾಗವು ಒಟ್ಟು 97,44,880 ರೂ. ಆದಾಯ ಗಳಿಸಿದೆ. ಈ ಆದಾಯವು ವಿಭಾಗದ ಇತಿಹಾಸದಲ್ಲಿಯೇ ನಂದಿ ಜಾತ್ರಾ ಕಾರ್ಯಾಚರಣೆಯಲ್ಲಿ ಗಳಿಸಿದ ಅತಿ ಹೆಚ್ಚಿನ ಆದಾಯವಾಗಿದೆ ಎಂದು ವಿಭಾಗದ ನಿಯಂತ್ರಣಾಧಿಕಾರಿಗಳು ನೌಕರರ ಶ್ರಮಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಶಿವರಾತ್ರಿ ಹಬ್ಬದ ಪ್ರಯುಕ್ತ ಈಶ ಫೌಂಡೇಶನ್ ಹಾಗೂ ನಂದಿ ಜಾತ್ರೆಗೆ…
0 notes
Text
ಬೆಂ.ಗ್ರಾ.: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಆರಂಭ -ಡಿಸಿ ಬಸವರಾಜು
ಬೆಂ.ಗ್ರಾ.: ನೊಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು ಮಾರ್ಚ್ 3ರಿಂದ ಜಿಲ್ಲೆಯ ಎಲ್ಲಾ ತಾಲೂಕು ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಾಯಿತ ರೈತರು ಸಂಬಂಧಪಟ್ಟ ತಾಲೂಕುಗಳ ಖರೀದಿ ಕೇಂದ್ರಗಳಿಗೆ ರಾಗಿಯನ್ನು ನಿಯಮಾನುಸಾರ ಕೊಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ. 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡಲು…
0 notes
Text
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ಡಾ.ಕೆ.ಸುಧಾಕರ್
ಬೆಂಗಳೂರು ಗ್ರಮಾಂತರ: ಜಿಲ್ಲಾಡಳಿತ ಭವನದ ಸಂಸದರ ಕಚೇರಿಯಲ್ಲಿ ಸೋಮವಾರ ಸಾರ್ವಜನಿಕರಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದ ಡಾ.ಕೆ.ಸುಧಾಕರ್ ಅಹವಾಲು ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಾರ್ವಜನಿಕರ, ತಮ್ಮ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಪ್ರತಿ ಸೋಮವಾರ ಹಮ್ಮಿಕೊಳ್ಳಲಾಗುತ್ತಿದ್ದು ಇದರ ಲಾಭ ಪಡೆದುಕೊಳ್ಳಿ ಎಂದು ಹೇಳಿದರು. ಇನ್ನು ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ಪರಿಶೀಲಿಸಿ ಸಂಬಂಧಪಟ್ಟ…
0 notes
Text
ರೈತರಿಗೆ ಮೋಸ ಮಾಡುವ ಅಧಿಕಾರಿಗಳ ಸ್ಥಳದಲ್ಲೇ ಅಮಾನತು ಮಾಡಿ: ಡಿಸಿಗಳಿಗೆ ಸಚಿವ ಮುನಿಯಪ್ಪ ಆದೇಶ
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟವನ್ನು ಕಾಪಾಡಬೇಕು, ಲೋಪವೆಸಗಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕಠಣಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಮುನಿಯಪ್ಪ ಅವರು ಸೋಮವಾರ ವಿಧಾನ ಸೌಧದಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನ್ಸಿ…
0 notes
Text
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ ಆಗ್ರಹಿಸಿ ಮಾ.5ರಂದು ಜಿಲ್ಲಾ ಕೇಂದ್ರಗಳಲ್ಲಿ ರೈತರ ಪ್ರತಿಭಟನೆ
ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ ಆಗಲೇಬೇಕು ಎಂದು ದಕ್ಷಿಣ ಭಾರತ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೇತರ ಹಾಗೂ ಕರ್ನಾಟಕದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ. ನಗರದ ಪ್ರೆಸ್ಕ್ಲಬ್ನಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಭಾರತ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೇತರ ರೈತ ಮುಖಂಡರು ಭಾಗವಹಿಸಿ ಮಾತನಾಡಿದ್ದು, ಕೇಂದ್ರ ಸರ್ಕಾರ ರೈತರ ಬೇಡಿಕೆಗಳ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಹೀಗಾಗಿ ವರ್ಷದಿಂದಲ��…
0 notes
Text
ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು; ಇಲ್ಲದಿದ್ದರೇ ಬೆಂಗಳೂರಿಗೆ ನಾವು ಮೋಸ ಮಾಡಿದಂತೆ: ಡಿಸಿಎಂ
ಬೆಂಗಳೂರು: “ಬೆಂಗಳೂರಿನ ರಸ್ತೆಗಳು ಭವಿಷ್ಯದಲ್ಲಿಯೂ ಉತ್ತಮವಾಗಿರಬೇಕು. ಆ ರೀತಿಯಾಗಿ ನಾವುಗಳು ಯೋಜನೆ ರೂಪಿಸಬೇಕು. ರಸ್ತೆ, ಪಾದಚಾರಿ ಮಾರ್ಗ, ಹಸಿರು ವಲಯ ಸೇರಿದಂತೆ ಎಲ್ಲಾ ಕಡೆಯೂ ಶಿಸ್ತು ಹಾಗೂ ಏಕರೂಪತೆ ಸಾಧಿಸಬೇಕು. ಇಲ್ಲದಿದ್ದರೇ ಬೆಂಗಳೂರಿಗೆ ನಾವುಗಳು ಮೋಸ ಮಾಡಿದಂತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ “ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ” ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ…
0 notes
Text
ಬಿಬಿಎಂಪಿ ಕಾಮಗಾರಿಗಳ ಗುಣಮಟ್ಟ ಪರೀಕ್ಷೆಗೆ “ಸಂಚಾರಿ ಪ್ರಯೋಗಾಲಯ”: ಡಿಸಿಎಂ ವೀಕ್ಷಣೆ
ಬೆಂಗಳೂರು: ಬಿಬಿಎಂಪಿ ವತಿಯಿಂದ ಕೈಗೊಳ್ಳುವ ಕಾಮಗಾರಿಗಳ ಗುಣಮಟ್ಟವನ್ನು ಪರೀಕ್ಷಿಸುವ ಸಲುವಾಗಿ 2 ಸಂಚಾರಿ ಪ್ರಯೋಗಾಲಯ ವಾಹನಗಳನ್ನು ಖರೀದಿಸಿದ್ದು, ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಇಂದು ವಾಹನಗಳ ವೀಕ್ಷಣೆ ಮಾಡಿದರು. ಬಿಬಿಎಂಪಿಯ ಕಾಮಗಾರಿಗಳ ಗುಣಮಟ್ಟ ಪರೀಕ್ಷೆ ಮಾಡಲು ಹೆಚ್ಚು ಅನುಕೂಲಕರವಾಗಿರುವ ನಿಟ್ಟಿನಲ್ಲಿ 2 ಸಂಚಾರಿ ಪ್ರಯೋಗಾಲಯ ವಾಹನಗಳು ಇಂದಿನಿಂದ ಕಾರ್ಯನಿರ್ವಹಿಸಲಿವೆ. 2 ವಾಹನಗಳಿಗಾಗಿ 38.50 ಲಕ್ಷ ವ್ಯಯಿಸಿದ್ದು,…
0 notes
Text
"ನಮ್ಮ ರಸ್ತೆ 2025" ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ
ಬೆಂಗಳೂರು: ಬಿಬಿಎಂಪಿ ವತಿಯಿಂದ ಮೂರು ದಿನಗಳ “ನಮ್ಮ ರಸ್ತೆ-2025” ಕಾರ್ಯಗಾರ, ಪ್ರದರ್ಶನ ಹಾಗೂ ಸಮಾವೇಶ ಕಾರ್ಯಕ್ರಮಕ್ಕೆ ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ನಮ್ಮ ರಸ್ತೆ-2025 ಫೆ. 20, 21 ಹಾಗೂ 22 ರಂದು ಕಾರ್ಯಕ್ರಮದಲ್ಲಿ ಕಾರ್ಯಗಾರಗಳು, ವಿವಿಧ ಸಂಚಾರ ಪದ್ಧತಿಗಳ ಪ್ರದರ್ಶನ ಹಾಗೂ ಸಮಾವೇಶಗಳು ನಡೆಯಲಿವೆ. ಒಂದೇ ಸೂರಿನಡಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ರಸ್ತೆ, ಪಾದಚಾರಿ ಮಾರ್ಗಗಳ ಅಭಿವೃದ್ಧಿ, ಸಂಚಾರ…
0 notes
Text
ಸ್ಪೈನಲ್ ಕಾರ್ಡ್ ಶಸ್ತ್ರ ಚಿಕಿತ್ಸೆ ಬಳಿಕ ಕುರುಬೂರು ಶಾಂತಕುಮಾರ್ ಆರೋಗ್ಯದಲ್ಲಿ ಚೇತರಿಕೆ
ಬೆಂಗಳೂರು: ಪಂಜಾಬ್ನಲ್ಲಿ ಆದ ಅಪಘಾತದಲ್ಲಿ ಗಾಯಗೊಂಡಿದ್ದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರಿಗೆ ಸ್ಪೈನಲ್ ಕಾರ್ಡ್ ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರು ನಿಧಾನವಾಗಿ ಗುಣಮುಖರಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಹೀಗಾಗಿ ತೀವ್ರನಿಗ ಘಟಕದಿಂದ ಇಂದು ವಾರ್ಡಿಗೆ ಸ್ಥಳಾಂತರಿಸಲಾಗಿದು, ಶಸ್ತ್ರ ಚಿಕಿತ್ಸೆ ಆಗಿರುವ ಕಾರಣ ಹೆಚ್ಚು ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಇನ್ನು ರಾಜ್ಯದ ರೈತಾಪಿ…
0 notes
Text
ಸರ್ಕಾರ ನಿಮ್ಮಗಳ ದ್ವಂದ ನಿಲುವನ್ನು ಉಪಯೋಗಿಸಿಕೊಂಡು ಸಾರಿಗೆ ನೌಕರರ ಹೊಟ್ಟೆಗೆ ತಣ್ಣೀರುಬಟ್ಟೆ ಕಟ್ತಾ ಇದೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಹೆಸರಲ್ಲಿ ಅನೇಕ ಸಂಘಟನೆ ಕಟ್ಟಿಕೊಂಡು ನೌಕರರ ಹಿತ ಕಾಪಾಡುವಲ್ಲಿ ವಿಫಲ ವಾಗಿರುವ ತಮ್ಮಲ್ಲಿ ನೌಕರರ ಸವಿನಯ ಮನವಿ. ಸಂಘಟನೆಗಳ ನಾಯಕರೇ ನೌಕರರ ನಿತ್ಯದ ಜೀವನವನ್ನು ಒಂದು ಸಾರಿ ತಮ್ಮ ಕಣ್ಣ ಮುಂದೆ ತಂದು ಕೊಳ್ಳಿ… ನಾವು ಮಾಡುವ ಕೆಲಸಕ್ಕೆ ಸರಿಯಾದ ವೇತನ ಸಿಗುತ್ತಿದೆಯಾ? ಜೀವನ ಸರಿಯಾಗಿ ನಡೆಯುತ್ತಿದೆಯಾ? ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರಾ? ನೌಕರರ ಕೌಟುಂಬಿಕ ಸಮಸ್ಯೆಗಳ ಬಗ್ಗೆ ತಮಗೆ ಅರಿವಿದೆಯಾ? ತಾವುಗಳು ಹತ್ತಾರು…
0 notes
Text
ಗೆದ್ದಲು ಹಿಡಿದು ನುಸಿಯಾದ ಕೆನರಾ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 8 ಲಕ್ಷ ರೂಪಾಯಿ
ಮಂಗಳೂರು: ಗೆದ್ದಲು ಹಿಡಿದು ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 8 ಲಕ್ಷ ರೂಪಾಯಿ ಹುಡಿಹುಡಿಯಾಗಿರುವ ಘಟನೆ ಕೋಟೆಕಾರ್ನಲ್ಲಿರುವ ಕೆನರಾ ಬ್ಯಾಂಕಿನಲ್ಲಿ ಜರುಗಿದೆ. ಈ ಸಂಬಂಧ ಹಣ ಹಾನಿಗೊಳಗಾಗಿರುವ ಗ್ರಾಹಕರು ಈ ಸಂಬಂಧ ಬೆಂಗಳೂರಿನ ಪ್ರಧಾನ ಕಚೇರಿಗೆ ದೂರು ನೀಡಿದ್ದಾರೆ. ಸಫಲ್ ಮಂಗಳೂರಿನ ಕೋಟೆಕಾರ್ನಲ್ಲಿರುವ ಕೆನರಾ ಬ್ಯಾಂಕಿನಲ್ಲಿ 8 ಲಕ್ಷ ರೂ. ಇಟ್ಟಿದ್ದರು. 6 ತಿಂಗಳ ಬಳಿಕ ಔಷದಿಗಾಗಿ ದುಡ್ಡು ತೆಗೆಯಲು ಲಾಕರ್ ತೆರೆದಿದ್ದಾರೆ. ಬ್ಯಾಂಕ್ ನವರೇ ಖುದ್ದಾಗಿ ಲಾಕರ್ ಓಪನ್ ಮಾಡಿದ್ದು, ಈ…
0 notes
Text
ಬನ್ನೂರು:ಈ ಬಾರಿ ಬೀಡನಹಳ್ಳಿ ಹೊರತುಪಡಿಸಿ ಆರೂರುಗಳಲ್ಲಿ ಇಂದು- ನಾಳೆ ಮಾರಿಹಬ್ಬ
ಬನ್ನೂರು: ಪ್ರತಿ ವರ್ಷ ಏಕಕಾಲಕ್ಕೆ ನಡೆಯುವ ಏಳೂರಿನ ಮಾರಮ್ಮ ದೇವತೆಗಳ ಹಬ್ಬ ಮಂಗಳವಾರ (ಫೆ.18) ಮತ್ತು ಬುಧವಾರ (ಫೆ.19) ಆಯಾಯ ಗ್ರಾಮಗಳಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ, ಈ ಬಾರಿ ಬೀಡನಹಳ್ಳಿಯಲ್ಲಿ ಮಾರಿಹಬ್ಬದ ಸಂಭ್ರಮ ಇಲ್ಲ. ಹೌದು! ಬೀಡನಹಳ್ಳಿಯ ಚಾಮುಂಡೇಶ್ವರಿ ದೇವಸ್ಥಾನದ ಅರ್ಚಕರೂ ಆದ ದೇವರಗುಡ್ಡ ವಯೋಸಹಜವಾಗಿ ನಿಧನರಾಗಿರುವುದರಿಂದ ಹಬ್ಬವನ್ನು ಈ ಬಾರಿ ಮಾಡದಂತೆ ಗ್ರಾಮದ ಮುಖಂಡರು ನಿರ್ಧರಿಸಿರುವುದರಿಂದ ಹಬ್ಬದ ಸಡಗರವಿಲ್ಲ. ಇನ್ನು ಉಳಿದ ಮಾಕನಹಳ್ಳಿ, ಬಸವನಹಳ್ಳಿ,…
0 notes
Text
ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಪ್ರಬಲ ಭೂಕಂಪ- ನಿದ್ರೆಗಣ್ಣಿನಲ್ಲೇ ಹೊರ ಓಡಿಬಂದ ನಿವಾಸಿಗಳು
ನ್ಯೂಡೆಲ್ಲಿ: ದೆಹಲಿ-ಎನ್ಸಿಆರ್ನ ಕೆಲವು ಭಾಗಗಳಲ್ಲಿ ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು, ನಿದ್ರೆ ಮಂಪರಿನಲ್ಲಿದ್ದ ನಿವಾಸಿಗಳು ಎದ್ನೋಬಿದ್ನೋ ಎಂ��ಂತೆ ತಡಬಡಾಯಿಸಿಕೊಂಡು ಮನೆಯಿಂದ ಓಡಿಬಂದಿದ್ದಾರೆ. ಇಂದು ಫೆ.17ರ ಮುಂಜಾನೆ 5:36ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಇದು ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ಹೊಂದಿದೆ ಎಂದು ದಾಖಲಾಗಿದೆ. ಭೂಕಂಪದಿಂದ ಯಾವುದೇ ಹಾನಿಯಾದೆ ಎಂಬ ಬಗ್ಗೆ ವರದಿಯಾಗಿಲ್ಲ. 5 ಕಿಲೋಮೀಟರ್ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ…
0 notes
Text
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ
ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಜಾರಿಗೊಳಿಸಿದೆ. ಆ ಆದೇಶದ ಪ್ರಮುಖಾಂಶಗಳು ಎಂದರೆ,…
0 notes
Text
20 ಕೋಟಿ ರೂ. ಮೌಲ್ಯದ ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಒತ್ತುವರಿ ತೆರವು
ಬೆಂಗಳೂರು: ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಪ್ರದೇಶದ 21.68 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ ಎಂದು ಬಿಬಿಎಂಪಿ ಕೆರೆಗಳ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ದೀಪಶ್ರೀ ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿದೆ. ಅದರಂತೆ ಇತ್ತೀಚೆಗೆ ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ (ಜರಗನಹಳ್ಳಿ ಸರ್ವೆ 7ರ) ಕೆರೆಗೆ ಸಂಬಂಧಿಸಿದಂತೆ ಕಂದಾಯ…
0 notes
Text
ವೇಣುಗೋಪಾಲ ಸ್ವಾಮಿ ಬ್ರಹ್ಮ ರಥೋತ್ಸವಕ್ಕೆ ಉಸ್ತುವಾರಿ ಸಚಿವ ಮುನಿಯಪ್ಪ ಚಾಲನೆ
ದೇವನಹಳ್ಳಿ: ಪ್ರಸಿದ್ಧ ವೇಣುಗೋಪಾಲ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮುನಿಯಪ್ಪ ಚಾಲನೆ ನೀಡಿದರು. ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಐತಿಹಾಸಿಕ ಪ್ರಸಿದ್ಧ ವೇಣುಗೋಪಾಲ ಸ್ವಾಮಿಯ ಬ್ರಹ್ಮರಥೋತ್ಸವದಿಂದು ನಾಡಿನ ಸಮಸ್ತ ಜನತೆಗೆ ಆಯುರಾರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದರು. ದೇವಸ್ಥಾನದ ಅಭಿವೃದ್ಧಿಯ ವಿಚಾರವಾಗಿ ಮಾತನಾಡಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಸಹಕಾರದೊಂದಿಗೆ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸರ್ಕಾರದ ವತಿಯಿಂದ…
0 notes